ಉಡುಪಿ: ಗದ್ದೆ ನಾಟಿ ಮಾಡಿದ ಬಿಗ್ಬಾಸ್ 7ರ ಸ್ಪರ್ಧಿ ಭೂಮಿ ಶೆಟ್ಟಿ-Times of karkala
ಹೌದು. ಓದಿನ ಜೊತೆಗೆ ನಟನೆ ಮಾಡಿಕೊಂಡು ಭೂಮಿ ಶೆಟ್ಟಿ ಬೆಂಗಳೂರಿನಲ್ಲಿ ನೆಲೆಸಿದ್ದರು. ಕೊರೊನಾ ಲಾಕ್ಡೌನ್ ಆದ ಪರಿಣಾಮ ಕೆಲ ಕಾಲ ಬೆಂಗಳೂರಿನಲ್ಲೇ ಇದ್ದ ಅವರು, ನಂತರ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಬೀಜೂರು ಗ್ರಾಮದ ಗಂಟಿಹೊಳೆಯಲ್ಲಿರುವ ತಮ್ಮ ಮನೆಗೆ ಬಂದಿದ್ದಾರೆ.
ಹೀಗೆ ಮನೆಗೆ ಬಂದಿರುವ ಭೂಮಿ ಶೆಟ್ಟಿ, ಸುಮ್ನೆ ಮನೆಯಲ್ಲೇ ಕುಳಿತು ಯಾಕೆ ಕಾಲ ಕಳೆಯುವುದು ಎಂದು ತಿಳಿದು ಅವರು ಕೂಡ ತಮ್ಮನ್ನ ತಾವು ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅಲ್ಲದೆ ತಾವು ಗೊಬ್ಬರ ಹೊರುವ ಹಾಗೂ ಗದ್ದೆಯಲ್ಲಿ ನಾಟಿ ಮಾಡುತ್ತಿರುವ ಫೋಟೋ ಹಾಗೂ ವಿಡಿಯೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಭೂಮಿ ಶೆಟ್ಟಿ, ಈ ಬಾರಿ ಬೇಸಾಯ ಬೇಡ ಎಂದು ಮನೆಯವರು ಹೇಳಿದ್ದರು. ನಾವೆಲ್ಲರೂ ಮನೆಯಲ್ಲಿಯೇ ಇದ್ದು, ಯಾಕೆ ವ್ಯವಸಾಯ ಮಾಡಬಾರದು ಎಂದು ಅಂದುಕೊಂಡು ನಾನು ಸಹಾಯ ಮಾಡುವುದಾಗಿ ತಿಳಿಸಿದೆ. ಹೀಗಾಗಿ ಈ ಬಾರಿ ಕೃಷಿ ಚಟುವಟಿಕೆಯಲ್ಲಿ ನಾನೂ ಭಾಗಿಯಾಗಿದ್ದು, ಈ ಕೆಲಸ ತುಂಬಾನೆ ಖುಷಿ ಕೊಟ್ಟಿದೆ ಎಂದು ತಿಳಿಸಿದ್ದಾರೆ.
ಭೂಮಿ ಬೆಳಗ್ಗಿನಿಂದ ಸಂಜೆಯವರೆಗೂ ಗೊಬ್ಬರ ಹೊತ್ತು ಗದ್ದೆಯಲ್ಲಿ ನಾಟಿ ಮಾಡಿದ್ದು, ಈ ಮೂಲಕ ತಾನೊಬ್ಬಳು ಅಪ್ಪಟ ಕೃಷಿಕಳು ಎಂಬುದನ್ನು ತೋರಿಸಿಕೊಟ್ಟಿದ್ದಾರೆ.




Post a comment