ಪಂಪ್ ವೆಲ್ ಬಳಿಯ ಮಸೀದಿಗೆ ಸೋಡಾ ಬಾಟಲಿ ಎಸೆದ ದುಷ್ಕರ್ಮಿಗಳು-Times Of Karkala
ಮಂಗಳೂರು,ಆ 22 :ನಗರದ ಪಂಪ್ ವೆಲ್ ವೃತ್ತದ ಬಳಿಯಿರುವ ತಾಖ್ಯ ಮಸೀದಿಗೆ ದುಷ್ಕರ್ಮಿಗಳು ಸೋಡಾ ಬಾಟಲಿ ಎಸೆದ ಘಟನೆ ಇಂದು ಮುಂಜಾನೆ ವರದಿಯಾಗಿದೆ. ಮಸೀದಿಯ ಎಡ ಭಾಗದಲ್ಲಿ ದುಷ್ಕರ್ಮಿಗಳು ಮುಂಜಾನೆ 3:45ರ ವೇಳೆಗೆ ಸೋಡಾ ಬಾಟಲಿ ಎಸೆದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಮಸೀದಿಯ ಕಾವಲುಗಾರನ ಕಣ್ತಪ್ಪಿಸಿ ಈ ಕೃತ್ಯ ಎಸಗಲಾಗಿದೆ.ವಿಷಯ ಬೆಳಕಿಗೆ ಬರುತ್ತಿದ್ದಂತೆ ಕ್ಷಣ ಮಾತ್ರದಲ್ಲಿ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ದಕ್ಷಿಣ ಎಸಿಪಿ ಕೋದಂಡರಾಮ ನೇತೃತ್ವದಲ್ಲಿ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
Post a comment