ಕಾರ್ಕಳ,ನ.1: ಕಾರ್ಕಳ ಬಿಜೆಪಿ ಯುವ ಮೋರ್ಚಾ ವತಿಯಿಂದ ವ್ಯಸನಮುಕ್ತ ಸಮಾಜದ ಕಡೆಗೆ ಯುವಕರ ನಡಿಗೆ ಎಂಬ ಧ್ಯೇಯವಾಕ್ಯದೊಂದಿಗೆ ತಾಲೂಕಿನ 34 ಗ್ರಾಮ ಪಂಚಾಯತ್ ಗಳಲ್ಲಿ ಭಾನುವಾರದಂದು ಬೆಳಿಗ್ಗೆ 7:30ಕ್ಕೆ ಕಾಲ್ನಡಿಗೆ ಜಾಥಾ ನಡೆಸಲಾಯಿತು.
ಕುಕ್ಕುಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಯ್ಯಪ್ಪ ನಗರದಿಂದ ಜೋಡುರಸ್ತೆಯವೆರೆಗೆ ನಡೆದ ಕಾಲ್ನಡಿಗೆಯ ಜಾಥಾಕ್ಕೆ ಶಾಸಕ ವಿ ಸುನಿಲ್ ಕುಮಾರ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ರವಿ ಮಡಿವಾಳ, ಅಶೋಕ್ ಶೆಟ್ಟಿ, ಯೋಗೀಶ್ ಸಾಲ್ಯಾನ್, ಅಂತೋನಿ ಹಾಗೂ ರವಿ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
Post a comment