ಹೆಬ್ರಿ ಬಳಿಯ ಚಾರಗ್ರಾಮದ ಯುವಕ ಪ್ರಶಾಂತ್ ದೇವಾಡಿಗ ಎಂಬವರು ಇಂದು ಮುಂಜಾನೆ ತನ್ನ ಮನೆಯ ಹತ್ತಿರದ ಬಸ್ ಸ್ಟಾಂಡ್ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಪ್ರಶಾಂತ್ 1 ವರ್ಷದ ಹಿಂದೆ ಮದುವೆಯಾಗಿದ್ದು ಹೆಬ್ರಿಯ ಖಾಸಗಿ ಸಂಸ್ಥೆಯೊಂದರಲ್ಲಿ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು .ಈತನ ಹೆಂಡತಿ ಹೆಬ್ರಿಯ ಖಾಸಗಿ ಸಂಸ್ಥೆಯೊಂದರಲ್ಲಿ ದುಡಿಯುತ್ತಿದ್ದಾರೆ.
ಕೌಟುಂಬಿಕ ಸಮಸ್ಯೆಯಿಂದ ಈತ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ .ಪ್ರಕರಣ ಹೆಬ್ರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಜಾಹೀರಾತು
Post a comment